ಫೆ.21ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳ್ಳಾರಿ ಭೇಟಿ ➤ ಸಚಿವ ಶ್ರೀರಾಮುಲು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ. 07. ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದರು.

Scroll to Top