ಸಾಲ  ಭಾದೆ     ➤  ಪೊಲೀಸ್ ಸಿಬ್ಬಂದಿ  ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಫೆ.07. ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಮೃತ ಪೊಲೀಸ್ ಸಿಬ್ಬಂದಿಯನ್ನು ರಾಮ ನಾಗೇಶ ಗೌಡ(32) ಎಂದು ಗುರುತಿಸಲಾಗಿದೆ. ಮೃತರು ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದವರಾಗಿದ್ದು, 2017ರ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಪ್ರಾರಂಭಿಸಿದ್ದರು ಎಂದು  ವರದಿ ತಿಳಿಸಿದೆ.

Also Read  ಮೊದಲು ಹಣ; ಉಳಿದಿದ್ದೆಲ್ಲಾ ನಂತರ..! ➤ ನಾಲ್ವರ ಜಗಳದಿಂದ ಬಯಲಾಯ್ತು ವೇಶ್ಯಾವಾಟಿಕೆ ದಂಧೆ

 

 

error: Content is protected !!
Scroll to Top