ಚಿರತೆ ಮರಿಗಳನ್ನು ಮನೆಗೆ ತಂದು ಸಾಕಿದ ಮಕ್ಕಳು ➤ ಮರಿಗಳನ್ನು ನೋಡಲು ಮುಗಿಬಿದ್ದ ಗ್ರಾಮಸ್ಥರು

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.08. ಜಿಲ್ಲೆಯ ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮವೊಂದರಲ್ಲಿ ಜಮೀನಿನಲ್ಲಿ ಸಿಕ್ಕ 2 ಚಿರತೆ ಮರಿಗಳನ್ನು  ಮಕ್ಕಳು ಮನೆಗೆ ತೆಗೆದುಕೊಂಡು ಹೋಗಿ ಸಾಕುತ್ತಿರುವಂತಹ ಘಟನೆ ನಡೆದಿದೆ. ಕೀರ್ತಿಕುಮಾರ್​ ಎನ್ನುವವರ ಜಮೀನಿನಲ್ಲಿ 8 ಚಿರತೆ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಬೇಟೆಗೆ ಹೋದಾಗ ಮರಿಗಳು ಏಕಾಂಗಿಯಾಗಿ ಜಮೀನಿನಲ್ಲಿ ತಿರುಗುತ್ತಿದ್ದವು.

ಆಗ ಅದರಲ್ಲಿ ಎರಡು ಚಿರತೆ ಮರಿಗಳನ್ನು ಮಕ್ಕಳು ಮನೆಗೆ ತೆಗೆದುಕೊಂಡು ಬಂದು ಕೋಳಿ ಗೂಡಿನಲ್ಲಿ 2 ಚಿರತೆ ಮರಿಗಳನ್ನು ಕೂಡಿ ಹಾಕಿದ ಮಕ್ಕಳು ಪೋಷಿಸಿದ್ದಾರೆ. ಚಿರತೆ ಮರಿಗಳನ್ನು ನೋಡಲು ಕೂಳಗೆರೆ ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ತಂಡ ಚಿರತೆ ಮರಿಗಳನ್ನ ರಕ್ಷಿಸಿದ ಅರಣ್ಯಾಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

Also Read  ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ

 

 

error: Content is protected !!
Scroll to Top