ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಬಲಿ!

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.08.   ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆನಗೋಡು ಬಳಿ‌ ನಡೆದಿದೆ. ಚಿರತೆಯೊಂದು ರಸ್ತೆ ದಾಟುವಾಗ ಈ ಅವಘಡ‌ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು ಕಂಡಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆ  ತಲೆ ದೇಹದ ಭಾಗಕ್ಕೆ ತೀವ್ರ  ಗಾಯಗಳಾಗಿವೆ.

ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಇದೀಗ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿದೆ. ಇದರಿಂದ ಈ ಭಾಗದಲ್ಲಿ ಚಿರತೆ ಚಲನವಲನ ಬಗ್ಗೆ ಸ್ಪಷ್ಟತೆ ಸಿಕ್ಕಿದೆ.  ರಸ್ತೆಯಲ್ಲಿ ಅಮೂಲ್ಯ ವನ್ಯಮೃಗ ಸಾವನ್ನಪ್ಪಿರುವುದು ಆತಂಕ ತಂದಿದ್ದು ಇನ್ನು ಮುಂದೆ ಅಪಘಾತದಲ್ಲಿ  ಚಿರತೆ ಸೇರಿದಂತೆ ವನ್ಯ ಮೃಗಗಳ ಸಾವನ್ನಪ್ಪದಂತೆ ಅರಣ್ಯ ಇಲಾಖೆ ಕ್ರಮ‌ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

 

 

error: Content is protected !!

Join the Group

Join WhatsApp Group