ಚರಂಡಿಯಲ್ಲಿ ಪಲ್ಟಿಯಾದ ಮರಳು ತುಂಬಿದ್ದ ಟಿಪ್ಪರ್ ➤ ಬಾಲಕ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.09. ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ  ರಾತ್ರಿ ಮನೆ ನಿರ್ಮಾಣ ಕೆಲಸಕ್ಕೆ ಮರಳು ತಂದಿದ್ದ ಟಿಪ್ಪರ್ ಮರಳನ್ನ ಅನಲೋಡ್ ಮಾಡುವಾಗ ಚರಂಡಿಯಲ್ಲಿ ಪಲ್ಟಿಯಾಗಿ ಟಿಪ್ಪರ್ ನಡಿ ಸಿಲುಕಿ ಬಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ.

ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ಕಳೆದ ರಾತ್ರಿ ಈ ದುರ್ಘಟನೆ ನಡೆದಿದ್ದು, ಮುಕಂದ್ (12) ಹಾಗೂ ಮಹಮ್ಮದ್ ಸಲೀಂ(66) ಮೃತಪಟ್ಟಿದ್ದಾರೆ .

 

error: Content is protected !!
Scroll to Top