(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.9. 9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಆತನನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ ಯಾಗಿದ್ದು,.ಮಣಿ ಕುಶಾಲ್ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ.

ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ ನೀವು ಇಷ್ಟ ಆಗೋದು ಇದಕ್ಕೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ರಾಮ್ ಚರಣ್ ಬಗ್ಗೆ ಬರೆದುಕೊಂಡಿದ್ದಾರೆ.
ರಾಮ್ ಚರಣ್ ಅವರು ‘ಆರ್ಆರ್ಆರ್’ ಸಿನಿಮಾ ಮಾಡುತ್ತಿರುವ ಸಾಧನೆಗಳನ್ನು ಸಂಭ್ರಮಿಸುತ್ತಿದ್ದಾರೆ. ಈ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲ ವಿದೇಶದಲ್ಲಿ ಸಿನಿಮಾ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ರೇಸ್ನಲ್ಲಿದೆ.