ವಿಷ ಸೇವಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಫೆ.10.  ವಿಷ ಸೇವಿಸಿ ಠಾಣೆಗೆ ಹೋಗಿ ರಕ್ಷಣೆಗೆ ಕೂಗಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಣೆ ಮಾಡಿರುವ ಘಟನೆ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.  ಡೆಲಿವರಿ ಏಜೆಂಟ್ ಆಗಿರುವ ಅನಿಲ್ (30) ಎಂಬ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಸ್ನೇಹಿತೆ ಲೀಲಾ (40) ಎಂಬುವವರೊಂದಿಗೆ ಮನಸ್ತಾಪವಾಗಿದ್ದ ಹಿನ್ನೆಲೆಯಲ್ಲಿ ಅನಿಲ್ ವಿಷ ಸೇವಿಸಿದ್ದ ಎಂದು  ತಿಳಿದಿದೆ.

ಈ ಹಿಂದೆ ಕೂಡ ಇಬ್ಬರ ನಡುವೆ ಜಗಳವಾಗಿದ್ದು, ಲೀಲಾ ಅವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಮಧ್ಯಪ್ರವೇಶಿಸಿದ್ದ ಪೊಲೀಸರು ಸಂಧಾನ ಮಾಡಿಸಿದ್ದರು.  ಆದರೆ, ಮತ್ತೆ ಇಬ್ಬರ ನಡುವೆ ಜಗಳವಾಗಿದ್ದು, ಮತ್ತೆ ಲೀಲಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯ ತಿಳಿದ ಅನಿಲ್ ವಿಷ ಸೇವಿಸಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ಬಳಿಕ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯ ಬಳಿ ಬಂದು ತಾನು ವಿಷ ಸೇವಿಸಿರುವುದಾಗಿ ತಿಳಿಸಿದ್ದಾನೆ. ಈ ವೇಳೆ ಆಘಾತಗೊಂಡ ಅಧಿಕಾರಿಗಳು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Also Read  ಬಿಜೆಪಿ ಅಭ್ಯರ್ಥಿ ಸಚಿವ ಡಾ.ಸುಧಾಕರ್ ಸೋಲಿನ ಹಿನ್ನೆಲೆ➤ಆತ್ಮಹತ್ಯೆಗೆ ಶರಣಾದ ಅಭಿಮಾನಿ.!

 

 

 

 

error: Content is protected !!
Scroll to Top