ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತ್ಯು               

(ನ್ಯೂಸ್ ಕಡಬ)newskadaba.com ತುಮಕೂರು, ಫೆ.12. ತುಮಕೂರಿನಲ್ಲಿ ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕ ಹುಲಿಕುಂಟೆಯ ಅನಿಲ್ ಹಾಗೂ ಆಂದ್ರದ ಶ್ರೀಧರ್ ಎಂದು ಗುರುತಿಸಲಾಗಿದೆ.

ಇಬ್ಬರು ಬೈಕ್ ನಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Also Read  ಹಸಿವು ನೀಗಿಸುವುದು ಪುಣ್ಯದ ಕೆಲಸ ➤ ಮೇಯರ್ ದಿವಾಕರ ಪಾಂಡೇಶ್ವರ

 

 

error: Content is protected !!
Scroll to Top