ಉದ್ಯಮಿ ಅಪಹರಿಸಿ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಹಾಸನ. ಫೆ.12. ಹಾಸನದ ಉದ್ಯಮಿಯೋರ್ವನನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೀನ್ ಮತ್ತು ಸಾಗರ್ ಬಂಧಿತ ಆರೋಪಿಗಳು ಎಂದು ಎಸ್ಪಿ ಹರಿರಾಮ್ ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಾಸನದ ಗವೇನಹಳ್ಳಿ ಬೈಪಾಸ್ ಸಮೀಪ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ಲಿಖಿತ್‌ ಗೌಡ (26) ಹತ್ಯೆಗೀಡಾದ ಯುವಕನಾಗಿದ್ದು, ಈತನ ಮೃತದೇಹ ಇತ್ತೀಚೆಗೆ ಹಾಸನ ತಾಲೂಕಿನ ಯೋಗೀಹಳ್ಳಿ ಅರಣ್ಯದಲ್ಲಿ ಪತ್ತೆಯಾಗಿತ್ತು ಎನ್ನಲಾಗಿದೆ.

 

error: Content is protected !!

Join the Group

Join WhatsApp Group