ಸುರತ್ಕಲ್: ಕಾರ್ಮಿಕರ ನಡುವೆ ಹೊಡೆದಾಟ     ➤  ಓರ್ವ ಮೃತ್ಯು.!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.13. ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಳಾಯಿ ಬಳಿ ಸಂಭವಿಸಿದೆ.

ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Also Read  33 ಕೆವಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಇಂದು ಪುತ್ತೂರು, ಕಡಬ, ಸುಬ್ರಹ್ಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ

 

error: Content is protected !!
Scroll to Top