ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.13.  ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ತಹಶೀಲ್ದಾರ್ ಕಚೇರಿಯ ಬಳಿ ಸಂಭವಿಸಿದೆ. ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಮೃತ ದುರ್ದೈವಿ.

ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ (ಶಿಕ್ಷಕ ಬಸವರಾಜ್) ಸಾವಿಗೆ ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್​.ಎಲ್ ಭಜಂತ್ರಿ, ಸಿಂದಗಿ ಬಿಇಓ, ಸಿಆರ್​​ಪಿ ಜಿ.ಎನ್ ಪಾಟೀಲ್ ಕಾರಣವೆಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.  

 

error: Content is protected !!

Join the Group

Join WhatsApp Group