ಯುವಕನಿಗೆ ಠಾಣೆಗೆ ಕರೆದೊಯ್ದು ಥಳಿತ ಆರೋಪ ➤ ಇಬ್ಬರು ಪೊಲೀಸರು ಅಮಾನತು

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಫೆ.14. ಯುವಕನನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ ಆರೋಪದ ಮೇಲೆ ಮೂಡಿಗೆರೆ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ‌.

ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ ವಸಂತ್, ಲೋಹಿತ್ ಅಮಾನತುಗೊಂಡವರಾಗಿದ್ದಾರೆ. ಇದರ ಜೊತೆಗೆ ಮೂಡಿಗೆರೆ ಠಾಣೆಯ ಸಬ್ ಇನ್ ಸ್ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಕಳ್ಳತನದ ಆರೋಪದ ದೂರಿನನ್ವಯ ಮೂಡಿಗೆರೆ ಠಾಣೆಯ ಪೊಲೀಸರು ದಾರದಹಳ್ಳಿ ಗ್ರಾಮದ ಮಂಜು ಎಂಬವರನ್ನು ಠಾಣೆಗೆ ಕರೆದೊಯ್ದು ಥಳಿಸಿದ್ದಾರೆಂದು ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು.

Also Read  ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ - ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

 

error: Content is protected !!
Scroll to Top