ಕಲುಷಿತ ನೀರು ಸೇವಿಸಿ ವಾಂತಿ ಭೇದಿ !!! ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಯಾದಗಿರಿ, ಫೆ.15. ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ.

ಸಾವಿತ್ರಮ್ಮ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ.

ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಮೃತಪಟ್ಟಿದ್ದಾರೆ.

Also Read  ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ➤ ಯುವಕನ ವಿರುದ್ದ ಫೋಕ್ಸೋ ಪ್ರಕರಣ ದಾಖಲು

 

error: Content is protected !!
Scroll to Top