ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಕಳೆದ ವರ್ಷ ಅ.23ರಂದು ತಮಿಳುನಾಡಿನ ಕೊಯಮತ್ತೂರು ಮತ್ತು ನ.19ರಂದು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 40 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ದಾಳಿ ನಡೆದ ಸ್ಥಳಗಳಲ್ಲಿ ಕರ್ನಾಟಕದ ಮೈಸೂರು ಸೇರಿದೆ. ದಾಳಿ ವೇಳೆ ಅಪಾರ ಪ್ರಮಾಣದ ಡಿಜಿಟಲ್‌ ಸಾಮಗ್ರಿ, ಆಧಾರ್‌ ಕಾರ್ಡ್‌, ಸಿಮ್‌ ಕಾರ್ಡ್‌, ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು 4 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group