ರೈಲಿನಲ್ಲಿ ಹೃದಯಾಘಾತ ➤ವಕೀಲ ಕೆ.ಪಿ. ಜೇಮ್ಸ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.17.  ರೈಲಿನಲ್ಲಿ ಸಂಚರಿಸುತ್ತಿರುವಾಗ ಹೃದಯಾಘಾತದಿಂದ ವಕೀಲರೊಬ್ಬರು ಮೃತಪಟ್ಟಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಂಭವಿಸಿದೆ. ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್ ಅವರು ತಮಿಳುನಾಡು ಕಡೆ ತೆರಳುತ್ತಿದ್ದ ಮಲಬಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ರಾತ್ರಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕೆ.ಪಿ.ಜೇಮ್ಸ್ ಅವರು ಪತ್ನಿಯೊಂದಿಗೆ ಚೆಂಗನೂರಿನ ಧಾರ್ಮಿಕ ಕ್ಷೇತ್ರಕ್ಕೆ ರೈಲಿನಲ್ಲಿ ತೆರಳುತ್ತಿದ್ದರು. ಹವಾನಿಯಂತ್ರಿತ ಕೋಚ್‌ನಲಿದ್ದ ಅವರು ರಾತ್ರಿ ವೇಳೆ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದರು. ಜೇಮ್ಸ್‌ ವಾಪಸ್‌ ಬರದ ಕಾರಣ ಅವರ ಪತ್ನಿ ಹುಡುಕಾಡಿದ್ದಾರೆ. ಎಲ್ಲೂ ಕಾಣದಿದ್ದಾಗ ಕಿರುಚಾಡಿದ್ದಾರೆ.

Also Read  ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

error: Content is protected !!
Scroll to Top