ವಿದ್ಯುತ್‌ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದ ಕಾಡಾನೆ ರಕ್ಷಣೆ..

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ.18.  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು.

ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು ಕಾಡಾನೆಯನ್ನು ರಕ್ಷಿಸಿದ್ದಾರೆ. ಬಂಡೀಪುರ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಟ್ವೀಟ್ ಮಾಡವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

 

Scroll to Top