ನೀರಿನ ಗುಂಡಿಗೆ ಬಿದ್ದು ಮರಿಯಾನೆ ಮೃತ್ಯು!

(ನ್ಯೂಸ್ ಕಡಬ) newskadaba.com ಕೊಡಗು, ಫೆ.18.   ನೀರಿನ ಗುಂಡಿಗೆ ಮರಿಯಾನೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ‌ ಎಳನೀರುಗುಂಡಿಯಲ್ಲಿ ಸಂಭವಿಸಿದೆ. ಚಂದ್ರಶೇಖರ್ ಎಂಬುವರಿಗೆ ಸೇರಿದ ತೋಟದಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೀರಿನ ಟ್ಯಾಂಕ್‌ ನಿರ್ಮಿಸಲು ಗುಂಡಿ ತೆಗೆಯಲಾಗಿತ್ತು. ಆನೆ ಕಳೇಬರ‌ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

Also Read  ನರೇಂದ್ರ ಮೋದಿ ಪ್ರಮಾನವಚನ ➤ನೂಜಿಬಾಳ್ತಿಲದಲ್ಲಿ ದೀಪಹಚ್ಚಿ ಸಂಭ್ರಮಿಸಿದ ಮೋದಿ ಅಭಿಮಾನಿಗಳು

error: Content is protected !!
Scroll to Top