ಕಡಬದ ನರಹಂತಕ ಕಾಡಾನೆ ಸೆರೆಗೆ ಬಲೆ ಬೀಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಇಲ್ಲಿನ ಮರ್ಧಾಳ‌ ಸಮೀಪದ ನೈಲ ಸಮೀಪ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು, ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಯನ್ನು ತರಿಸಿದೆ.

ಸೋಮವಾರ ಬೆಳಿಗ್ಗೆ ಕಾಡಾನೆಯು ಇಬ್ಬರನ್ನು ತಿವಿದು ಕೊಂದು ಹಾಕಿತ್ತು. ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿತ್ತು. ಸೋಮವಾರ ರಾತ್ರಿ ವೇಳೆಗೆ ಮೈಸೂರು ಹಾಗೂ ದುಬಾರೆಯಿಂದ ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ.

Also Read  ಕಡಬ - ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ - ಕಡಬ ಸಂಪರ್ಕ ಕೊಂಡಿ

error: Content is protected !!
Scroll to Top