ಲೋಕಾಯುಕ್ತ ಪೊಲೀಸರಿಂದ ಎ.ಇ ರೂಪಾ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.21 . ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್‌ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯದ ಸಭಾಂಗಣ ನಿರ್ಮಾಣ ಕಾಮಗಾರಿಯೊಂದರ ಅಂತಿಮ ಬಿಲ್‌ ಪಾವತಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಲು ರೂಪಾ ₹10 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಗುರಿಪಲ್ಲದ ಕನ್ಯಾಡಿ ಗ್ರಾಮದ ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

Also Read  ಬಂಟ್ವಾಳ: ಟೆಂಪೋಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ

 

error: Content is protected !!
Scroll to Top