ಯಾತ್ರೆಗೆ ತೆರಳಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ! ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.23. ಮೆಕ್ಕಾದಲ್ಲಿ ಉಮ್ರಾ ಯಾತ್ರೆ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ಬುಧವಾರದಂದು ರಾತ್ರಿ ನಡೆದಿದೆ.


ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್, ಸಾಮಾಜಿಕ ಕಾರ್ಯಕರ್ತ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಇವರು ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಮೂಲಕ ಮೆಕ್ಕಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ರಾತ್ರಿ ಬಸ್ ಮೂಲಕ ಮದೀನಾಕ್ಕೆ ಹೋಗುವಾಗ ಬಸ್ ,ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ

 

error: Content is protected !!
Scroll to Top