ಪತ್ನಿ ಕೊಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಪತಿ

(ನ್ಯೂಸ್ ಕಡಬ)newskadaba.com  ಚಾಮರಾಜನಗರ, ಫೆ.22. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ವಾಟ್ಸಾಪ್ ಸ್ಟೇಟಸ್ ಹಾಕಿ ಖತರ್ನಾಕ್ ಪತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದಿದೆ.


ನಾಗಮಲೆಯ ಲಕ್ಷ್ಮಿ ಕೊಲೆಯಾದ ದುರ್ದೈವಿ ಎನ್ನಲಾಗಿದೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಎರಭಯ್ಯನ ಹಳ್ಳಿಯ ಮುನಿರಾಜ್ ಎಂಬವರನ್ನು ಮದುವೆಯಾಗಿದ್ದಳು. ಬಳಿಕ ತನ್ನ ಗಂಡನನ್ನು ತೊರೆದು ಬೇರೊಬ್ಬನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದಳು. ಇದರಿಂದ ಬೇಸತ್ತಿದ್ದ ಗಂಡ ಮುನಿರಾಜ್ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.

Also Read  ದೇಶದಲ್ಲಿ 'H3N2' ಜೊತೆಗೆ 'H1N1' ಪ್ರಕರಣಗಳಲ್ಲಿ ಹೆಚ್ಚಳ       ➤ ಆರೋಗ್ಯ ಸಚಿವಾಲಯ  

 

error: Content is protected !!
Scroll to Top