ಭಟ್ಕಳ ಒಂದೇ ಮನೆಯ ನಾಲ್ವರ ಹತ್ಯೆ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com. ಭಟ್ಕಳ. ಫೆ.27. ತಾಲೂಕಿನ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಭಟ್ಕಳ ಪೊಲೀಸರು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ  ಕೊಲೆಯಾದವರ ಸೊಸೆ ವಿದ್ಯಾ ಭಟ್ ಹಾಗೂ ಶ್ರೀಧರ್ ಭಟ್​ರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿ ವಿನಯ್​ ಭಟ್ ಪರಾರಿಯಾಗಿದ್ದ. ನಿನ್ನೆ ಆತ ಇರುವ ಖಚಿತ ಮಾಹಿತಿ ಮೇರೆಗೆ ಆರೋಪಿ ವಿನಯ್​ ಭಟ್​ನನ್ನು ಭಾನುವಾರ ಶಿವಮೊಗ್ಗದಲ್ಲಿ ಬಂಧಿಸಿ ಭಟ್ಕಳಕ್ಕೆ ಕರೆತಂದಿದ್ದಾರೆ. ಫೆಬ್ರವರಿ 24ರಂದು ಆಸ್ತಿ ವಿಚಾರಕ್ಕಾಗಿ ಹಾಡವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿ ತಲೆ ಮರೆಸಿಕೊಂಡಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ.

error: Content is protected !!

Join the Group

Join WhatsApp Group