ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ➤ ಚಾಲಕ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com. ಮಡಿಕೇರಿ. ಫೆ.28.  ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮೇಕೇರಿ ಬಳಿ ವರದಿಯಾಗಿದೆ.

ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗೆ ಲಾರಿಯಲ್ಲಿ ಗೊಬ್ಬರ ಸಾಗಿಸಲಾಗುತ್ತಿತ್ತು. ಮೇಕೇರಿ ಮಸೀದಿ ಬಳಿಯ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಮುಗುಚಿ ಬಿದ್ದಿದೆ. ಗೊಬ್ಬರ ಚೀಲಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು,  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!

Join the Group

Join WhatsApp Group