ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ.


ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

Also Read  ಆಲಂಕಾರು ಶ್ರೀ ಭಾರತೀ ಶಾಲೆಗೆ 2 ಉಚಿತ ಬಸ್‌ಗಳ ಹಸ್ತಾಂತರ ➤ ಕರ್ಣಾಟಕ ಬ್ಯಾಂಕ್ ಮತ್ತು LIC ಪ್ರಾಯೋಜಕತ್ವ

error: Content is protected !!
Scroll to Top