ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲೆಕ್ಕಾಧಿಕಾರಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾರೆ.


ಟೆಂಡರ್ ಕೊಡಿಸುವ ವಿಚಾರದಲ್ಲಿ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ.

Also Read  ಹೊಸ ವರ್ಷದಂದು ಜನಿಸಿದ ಮೊದಲ ಮಗುವಿಗೆ ಸಿಕ್ಕಿತು ಬಂಪರ್ ಗಿಫ್ಟ್ ► 5 ಲಕ್ಷ ರೂ. ವಿತರಿಸಿದ ಮೇಯರ್

error: Content is protected !!
Scroll to Top