➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ

(ನ್ಯೂಸ್ ಕಡಬ) newskadaba.com.ಯಾದಗಿರಿ, ಮಾ 4.   ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ.  ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು.

ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು ನೋವು ತೊಡಿಕೊಂಡಿದ್ದನಂತೆ. ಇಂದು(ಮಾ.4) ಬೆಳಿಗ್ಗಿನ ಜಾವ ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋಗಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top