ಮಾ.09 ರಂದು ರಾಜ್ಯ ಬಂದ್ ಗೆ ಕರೆ        

(ನ್ಯೂಸ್ ಕಡಬ)newskadaba.com ತುಮಕೂರು, ಮಾ. 06. ಚುನಾವಣಾ ವರ್ಷದಲ್ಲಿ ಬಿಜೆಪಿ ಸರಕಾರದ ವಿರುದ್ದ ಸಿಗುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಈಗ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಡಿಕೆಶಿ, “ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಎರಡು ಗಂಟೆಗಳ ಕಾಲ ಬಂದ್ ನಡೆಸಲು ನಾವು ಈ ಮೂಲಕ ಕರೆ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Also Read  ಮದ್ಯ ಖರೀದಿ ವಯಸ್ಸನ್ನು 21ರಿಂದ 18 ಕ್ಕೆ ಇಳಿಸುವ ನಿರ್ಧಾರದಿಂದ ಹಿಂದೆ ಸರಿದ ಸರಕಾರ

 

error: Content is protected !!
Scroll to Top