ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 32 ವರ್ಷದ ಫಿಸಿಯೋಥೆರಪಿಸ್ಟ್ ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣ ಸಂಬಂಧ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೇಸ್ತ್ರಿ ವೀರ ಆಂಜನೇಯುಲು ಅಲಿಯಾಸ್ ಪುಲಿ (38), ಅನಂತಪುರದ ಗೋವರ್ಧನ್ ಅಲಿಯಾಸ್ ಡಿಜೆ (23) ಮತ್ತು ಬುಡ್ಡಪ್ಪ ಅಲಿಯಾಸ್ ಭಾಸ್ಕರ್ (46) ಆರೋಪಿಗಳು.

ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಪೆನುಕೊಂಡದ ಶ್ರೀಧರ್ ಎಂಬಾತನನ್ನು ಕೊಲೆ ಮಾಡಿದ ಆರೋಪ ಇವರ ಮೇಲಿದೆ.

Also Read   ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಏರ್ಪಟ್ಟಿದೆ    ➤ಎಚ್‌.ಡಿ. ದೇವೇಗೌಡರ ಬಾಂಬ್‌..!!

 

 

error: Content is protected !!
Scroll to Top