ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮಾ. 07. ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಮುಲ್ಕಿ ಸೇತುವೆ ಬಳಿ ಮಂಗಳವಾರದಂದು ನಡೆದಿದೆ.

ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ ಅಕ್ಬರ್ ಪಾಶ(61) ಹಾಗೂ ಪತ್ನಿ ಖತೀಜಾಬಿ(46) ಎಂದು ಗುರುತಿಸಲಾಗಿದೆ. ಇವರಿಬ್ಬರು ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಪಾಸ್ ಪೋರ್ಟ್ ಮಾಡಿಸಲೆಂದು ತೆರಳುತ್ತಿದ್ದ ವೇಳೆ ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಇದೇ ಸಂದರ್ಭ ಅದೇ ಮಾರ್ಗವಾಗಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ

error: Content is protected !!
Scroll to Top