➤ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com. ಪುತ್ತೂರು, ಮಾ 9.  ಕಳೆದ ಐದುವರ್ಷಗಳ ಹಿಂದೆ ಕೌಕ್ರಾಡಿಯ ದಡ್ಡಲಪಲ್ಕೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಆರೋಪಿಗಳನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.

ಕುಣಿಗಲ್ ಮೂಲದ ಮೂರ್ತಿ ಹಾಗೂ ತೆಂಕಿಲ ನಿವಾಸಿ ಪವನ್ ಬಂಧಿತ ಆರೋಪಿಗಳು. ಮೂರ್ತಿ ಬಸ್ ಚಾಲಕನಾಗಿದ್ದು, 2014ರ ಮೇನಲ್ಲಿ ದದ್ದಲಪಲ್ಕೆ ಎಂಬಲ್ಲಿ ಚಾಲನೆ ಮಾಡುತ್ತಿದ್ದ ಬಸ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿತ್ತು. ಬೆಂಗಳೂರಿನ ಹೊಸಕೋಟೆಯಲ್ಲಿ ಮೂರ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತೆಂಕಿಲ ನಿವಾಸಿ ಪವನ್ ಎಂಬಾತ ಎಎಸ್‌ಐ ಮೇಲೆ ಹಲ್ಲೆ ನಡೆಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಪವನ್ ವಿರುದ್ಧ 2022ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಎಎಸ್‌ಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಈತ ಎರಡನೇ ಆರೋಪಿಯಾಗಿದ್ದ. ನಗರ ಠಾಣೆ ಪೊಲೀಸರು ಪವನ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

error: Content is protected !!
Scroll to Top