ಬಂಟ್ವಾಳ: ಮೂರ್ಛೆ ರೋಗಕ್ಕೆ ಒಳಗಾದ ಚಾಲಕ ➤ ಹಲವು ವಾಹನಗಳಿಗೆ ಲಾರಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳಮಾ. 09. ಲಾರಿ ಚಾಲನೆಯಲ್ಲಿರುವಾಗಲೇ ಚಾಲಕನಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಹಾಸನದ ಕಡೆಗೆ ತೆರಳುತ್ತಿದ್ದ ಲಾರಿಯು ಬಿಸಿರೋಡಿನ ಪೆಟ್ರೋಲ್ ಪಂಪ್ ಬಳಿ ತಲುಪುತ್ತಿದ್ದಂತೆಯೇ ಚಾಲಕನಿಗೆ ಮೂರ್ಚೆ ರೋಗ ಬಾಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ಲಕ್ಷ್ಮಣ್ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿಯು ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿಸುತ್ತಿದ್ದ ರಿಟ್ಸ್ ಕಾರಿಗೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಆಗಿಲ್ಲ.‌

Also Read  ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಲ್ಲಿ ಡೀಲರ್ ಶಿಪ್ ಕ್ಯಾನ್ಸಲ್ ➤ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆದೇಶ

error: Content is protected !!
Scroll to Top