ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು !      

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ.

ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ ಕಾರ್ಮಿಕರಿಗೆ ಕೆಲಸ ನೀಡಿದ್ದರು. ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

Also Read  ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಸಮಿತಿ ಗ್ರೀನ್ ಸಿಗ್ನಲ್

error: Content is protected !!
Scroll to Top