ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಓಮ್ನಿ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಮಾ. 10. ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲನಿ ಬಳಿ ನಡೆದಿದೆ.

ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಓಮ್ನಿ ಕಾರು ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ, ಅಲ್ಲೇ ಇದ್ದ ಮರಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಚಾಲಕ, ಮಗು ಸಹಿತ ನಾಲ್ವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Also Read  ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ ➤ ರಾಜ್ಯ ಸರಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ

error: Content is protected !!
Scroll to Top