ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಂಪ್ಲೆಕ್ಸ್‌ನ ಹೊಟೇಲ್‌ವೊಂದರಲ್ಲಿ ತಂಗಿದ್ದ 140ಕ್ಕೂ ಹೆಚ್ಚು ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

error: Content is protected !!

Join the Group

Join WhatsApp Group