➤ ತಾಪಮಾನ ಏರಿಕೆ➤ಬಿಸಿಲಿನ ಶಾಖದಿಂದ ಪರದಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರು!

(ನ್ಯೂಸ್ ಕಡಬ) newskadaba.com. ಮಂಗಳೂರು . ಮಾ 13.  ಕರಾವಳಿ ಕರ್ನಾಟಕದಲ್ಲಿ ತಾಪಮಾನ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುವುದರೊಂದಿಗೆ ನಿರಂತರ ಬಿಸಿಲಿನ ಝಳವನ್ನು ನಿಭಾಯಿಸಲು ಜನರು ಹೆಣಗಾಡುತ್ತಿದ್ದಾರೆ.

ಮಂಗಳೂರಿನ ಪಣಂಬೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ 39.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸನ್‌ಬರ್ನ್ ಮತ್ತು ಇತರ ತಾಪಮಾನ ಸಂಬಂಧಿತ ಅಸ್ವಸ್ಥತೆಗಳೊಂದಿಗೆ ಬಳಲುತ್ತಿರುವ ಜನರು ಹೆಚ್ಚು ಜಾಗರೂಕರಾಗಿರಬೇಕಿದೆ.  ಬಂಟ್ವಾಳದ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿರುವ ಸಂತೋಷ್ ಪೂಜಾರಿ ಅವರಿಗೆ ಬಿಸಿಲು ಅಲರ್ಜಿಯಾಗಿ ಚರ್ಮ ಸುಟ್ಟಿದೆ. ‘ತಾಪಮಾನ ಏರಿಕೆ ಮಾನವ ನಿರ್ಮಿತ ದುರಂತ. ನಾವು ಹೆಚ್ಚು ಸಸಿಗಳನ್ನು ನೆಡಬೇಕು, ಈಗಿರುವ ಮರಗಳನ್ನು ಸಂರಕ್ಷಿಸಬೇಕು ಮತ್ತು ತೆರೆದ ನೀರಿನ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಮತ್ತು ಮರು ಶಕ್ತಿ ತುಂಬಬೇಕು’ ಎಂದು ಮಂಗಳೂರಿನ ಜೋಶ್ವಾ ಹೇಳಿದ್ದಾರೆ.

Also Read  2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

error: Content is protected !!
Scroll to Top