➤ ಆಕಾಶವಾಣಿ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ ವಿಧಿವಶ

(ನ್ಯೂಸ್ ಕಡಬ) newskadaba.com. ಬೆಂಗಳೂರು. 13.  ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಆಕಾಶವಾಣಿ ಕಾರ್ಯಕ್ರಮಗಳ ನಿರೂಪಕಿ ಸುಮಂಗಲಾ ಎಸ್ ಮುಮ್ಮಿಗಟ್ಟಿ(59) ಅವರು, ವಿಧಿವಶರಾಗಿದ್ದಾರೆ. ಅಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು.

ಮಾ. 12 ರಂದು  ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.  ಮೃತ ಸುಮಂಗಲಾ ಎಸ್ ಮುಮ್ಮಿಗಟ್ಟಿಗೆ ಪತಿ ಹಾಗೂ ಪುತ್ರರನ್ನು ಅಗಲಿದ್ದಾರೆ . 40ಕ್ಕೂ ಹೆಚ್ಚು ವಿಜ್ಞಾನ ಕೃತಿಗಳನ್ನು, ಸಾವಿರಾರೂ ಲೇಖನಗಳನ್ನು, ನೂರಾರು ವಿಜ್ಞಾನ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದಂತ ಕೀರ್ತಿ ಇವರಿಗೆ ಸಲ್ಲುತ್ತದೆ.

Also Read  ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top