ಮಾಡಾಳು ಪುತ್ರ ಸೇರಿ ಐವರು ಪೊಲೀಸ್ ಕಸ್ಟಡಿಗೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 13. ಬೆಂಗಳೂರು, ಮಾ 13 ಕೆಎಸ್ ಡಿಎಲ್ ಹಗರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ ಪುತ್ರ ಪ್ರಶಾಂತ್ ಹಾಗೂ ಇತರ ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಶಾಂತ್ ಮಾಡಾಳು ಸೇರಿದಂತೆ ಐವರು ಆರೋಪಿಗಳ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಐವರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು, ಇದೀಗ ಪೊಲೀಸ್ ಕಸ್ಟಡಿ ಅವಧಿಯನ್ನು ಮಾ.16 ವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

error: Content is protected !!

Join the Group

Join WhatsApp Group