ಬಾವಿಯಲ್ಲಿ ಹತ್ತು ವರ್ಷದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 14. ಹತ್ತು ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪನತ್ತಡಿ ಸಮೀಪದ ಚಾಮುಂಡಿ ಕುನ್ನು ಎಂಬಲ್ಲಿ ನಡೆದಿದೆ.


ಮೃತ ಬಾಲಕನನ್ನು ಪ್ರಭಾಕರ ಎಂಬವರ ಪುತ್ರ 5ನೇ ತರಗತಿ ವಿದ್ಯಾರ್ಥಿ ಅರ್ಜುನ್ (10) ಎಂದು ಗುರುತಿಸಲಾಗಿದೆ. ದಿಢೀರ್ ನಾಪತ್ತೆಯಾಗಿದ್ದ ಬಾಲಕನನ್ನು ಮನೆಯವರು ಹಾಗೂ ಪರಿಸರ ವಾಸಿಗಳು ಶೋಧ ನಡೆಸಿದಾಗ ಆವರಣ ಇಲ್ಲದ ಬಾವಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದು, ಕೂಡಲೇ ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದನು ಎನ್ನಲಾಗಿದೆ.

error: Content is protected !!

Join the Group

Join WhatsApp Group