ಬೆಂಗಳೂರು- ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ರಾಮನಗರ, ಮಾ. 14. ಬೆಂಗಳೂರು- ಮೈಸೂರು ಹೆದ್ದಾರಿಯ ಅಪೂರ್ಣ ಕಾಮಗಾರಿ ನಡುವೆಯೇ ಟೋಲ್ ಸಂಗ್ರಹ ಆರಂಭಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ಮಂಗಳವಾರದಂದು ಪ್ರತಿಭಟನೆ ನಡೆಸಿದರು‌.

‌ಟೋಲ್ ಸಂಗ್ರಹವನ್ನು ವಿರೋಧಿಸಿ ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಾಕಾರರು, ಬಿಜೆಪಿ ಸರಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಶೇಷಗಿರಿಹಳ್ಳಿ, ಹೆಜ್ಜಾಲ ಬಳಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿಲ್ಲ. ಹೆಜ್ಜಾಲ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಸ್ಕೈ ವಾಕ್ ನಿರ್ಮಿಸಿಲ್ಲ. ಹೀಗೆ ಅಪೂರ್ಣ ಕಾಮಗಾರಿ ನಡುವೆಯೇ ಹೆದ್ದಾರಿ ಟೋಲ್ ಆರಂಭಿಸಲಾಗಿದೆ ಎಂದು ದೂರಿದರು.

Also Read  ಆರ್ಡರ್ ಡೆಲಿವರಿಯಾಗದ ಹಿನ್ನೆಲೆ ➤ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ಎಂದು ಭಾವಿಸಿ ಕರೆಮಾಡಿ 48 ಸಾವಿರ ಕಳೆದುಕೊಂಡ ನಗರದ ವ್ಯಕ್ತಿ..!!

error: Content is protected !!
Scroll to Top