ಮಂಗಳೂರು: ಬಸ್ ನಿಲ್ದಾಣದಲ್ಲಿ ಪೋಷಕರು ಬಿಟ್ಟು ಹೋಗಿದ್ದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 16. ಇಲ್ಲಿನ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪ್ರತ್ಯೇಕವಾಗಿ ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಗಂಡು ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು. ಶಿಶುವಿಗೆ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇಷ್ಟು ದಿನಗಳಾದರೂ ತಂದೆ ತಾಯಿ ಮಗುವನ್ನು ನೋಡಲು ಬಂದಿರಲಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣಾ ಪೊಲೀಸರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group