ಗಂಜಿಮಠ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕುಪ್ಪೆಪದವು, ಮಾ. 16. ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರದಂದು ರಾತ್ರಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಸಂದೀಪ್ ಶೆಟ್ಟಿ ಮೊಗರು(35) ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9 ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗಾಗಿ ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದ, ಅವಿವಾಹಿತ ಸಂದೀಪ್ ಶೆಟ್ಟಿ ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣವೆನ್ನಲಾಗುತ್ತಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.

error: Content is protected !!

Join the Group

Join WhatsApp Group