ಸಂಪೂರ್ಣ ಬಡತನ ನಿರ್ಮೂಲನೆಗೆ ಬಜೆಟ್ ಮೂಲಕ ಕ್ರಮ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.16. ಸಂಪೂರ್ಣ ಬಡತನ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಒಳಗೊಂಡ ಕಾಸರಗೋಡು ಜಿಲ್ಲಾ ಪಂಚಾಯತ್ ನ 2023-24 ನೇ ಸಾಲಿನ ಮುಂಗಡ ಪತ್ರವನ್ನು ಉಪಾಧ್ಯಕ್ಷ ಶಾನ್ ವಾಜ್ ಪಾದೂರು ಮಂಡಿಸಿದರು.


ಮೂಲಭೂತ ಸೌಲಭ್ಯಗಳ ಜೊತೆಗೆ ಉತ್ಪಾದನಾ ವಲಯಕ್ಕೆ ಆದ್ಯತೆ ನೀಡಿದ್ದು , 103034000 ರೂ. ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಜಿಲ್ಲೆಯ ಎಲ್ಲಾ ಶಾಲೆಗಳು ಸಂಪೂರ್ಣ ಸೋಲಾರ್ ಜಿಲ್ಲೆಯಾಗಲಿದೆ. ಏಪ್ರಿಲ್ ತಿಂಗಳೊಳಗೆ ಎಲ್ಲಾ ಶಾಲೆಗಳಲ್ಲಿ ಸೋಲಾರ್ ಅಳವಡಿಸಲಾಗುವುದು.

error: Content is protected !!

Join the Group

Join WhatsApp Group