ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

error: Content is protected !!
Scroll to Top