ಕೈದಿಯನ್ನು ಶಾಪಿಂಗ್‌ ಮಾಲ್‌ ಗೆ ಕರೆದೊಯ್ದ 4 ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಲಕ್ನೋ, ಮಾ. 18. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯನ್ನು ಶಾಪಿಂಗ್ ಮಾಲ್‌ ಗೆ ಕರೆದೊಯ್ದ ಆರೋಪದ ಮೇಲೆ ನಾಲ್ಕು ಜನ ಪೊಲೀಸರನ್ನು ಅಮಾನತುಗೊಳಿಸಿದ ಘಟನೆ  ಉತ್ತರಪ್ರದೇಶದಲ್ಲಿ ನಡೆದಿದೆ.


ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಎಸ್‌ಐ ರಾಮ್‌ ಸೇವಕ್ ಮತ್ತು ಕಾನ್‌ಸ್ಟೆಬಲ್‌ ಗಳಾದ ಅನುಜ್ ಧಾಮ, ನಿತಿನ್ ರಾಣಾ ಮತ್ತು ರಾಮಚಂದ್ರ ಪ್ರಜಾಪತಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಲಕ್ನೋ ಪೊಲೀಸ್ ಕಮಿಷನರೇಟ್ ತಿಳಿಸಿದೆ.

error: Content is protected !!

Join the Group

Join WhatsApp Group