ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ    ➤ ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ          

(ನ್ಯೂಸ್ ಕಡಬ)newskadaba.com  ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

ಕೆಂಗೇರಿ ಹೋಬಳಿಯ ಕಂದಾಯ ನಿರೀಕ್ಷಕ ಸುರೇಶ್‌ ಜಿ.ಸಿ. (51) ದೋಷಿ ಎಂದು ತೀರ್ಮಾನಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, 5 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ.4 ಲಕ್ಷ ದಂಡ ವಿಧಿಸಿದೆ.

error: Content is protected !!
Scroll to Top