ನಾಗರ ಹಾವಿನ ಕಡಿತದಿಂದ ತಾಯಿಯನ್ನು ಕಾಪಾಡಿದ ಮಗಳು

ನ್ಯೂಸ್ ಕಡಬ) newskadaba.com. ಪುತ್ತೂರು, ಮಾ20.  ಅಮ್ಮನ ಜೀವಕ್ಕಾಗಿ ಮಗಳೊಬ್ಬಳು ಸಾಹಸ ಮೆರೆದ ಘಟನೆ  ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಮಾಡಾವು ಎಂಬ ಗ್ರಾಮದಲ್ಲಿ ಶ್ರಮ್ಯ ರೈ ಎಂಬ ಯುವತಿಯೊಬ್ಬಳು ಹಾವು ಕಡಿದ ತನ್ನ ಅಮ್ಮನಿಗೆ ಧೈರ್ಯ ತುಂಬಿ ಬಾಯಿಂದ ಕಚ್ಚಿ ವಿಷ ತೆಗೆದು ಅಮ್ಮನ ಜೀವವನ್ನು ಕಾಪಾಡಿದ್ದಾಳೆ.

ಕೆಯ್ಯೂರು ಗ್ರಾಮ ಪಂಚಾಯತ್‌ ಸದಸ್ಯೆ ಮಮತಾ ರೈ ಎಂಬವರು ತಮ್ಮ ಅಡಿಕೆ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಅವರಿಗೆ ಆಕಸ್ಮಿಕವಾಗಿ ನಾಗರ ಹಾವೊಂದು ಕಡಿದಿದೆ. ಇದನ್ನು ಗಮನಿಸಿದ ಮಗಳು ಭಯಪಡದೆ ಹಾವು ಕಚ್ಚಿದ ದೇಹದ ಭಾಗವನ್ನು ಬಾಯಿಯಿಂದ ಕಚ್ಚಿ ವಿಷವನ್ನು ತೆಗೆದು ಪ್ರಥಮ ಚಿಕಿತ್ಸೆ ನೀಡಿ ತಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

error: Content is protected !!

Join the Group

Join WhatsApp Group