ಹಾಡಹಗಲೇ 2 ಮನೆಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

Theft, crime, Robbery

(ನ್ಯೂಸ್ ಕಡಬ) newskadaba.com ಮೂಡಬಿದ್ರೆಮಾ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ಮನೆಗಳಿಗೆ ಬೆಳಗ್ಗಿನ ಜಾವ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾದ ಘಟನೆ ಮೂಡಬಿದ್ರೆಯಲ್ಲಿ ನಡೆದಿದೆ.

ಬ್ಯಾಂಕ್ ಉದ್ಯೋಗಿಗಳಾಗಿರುವ ರತ್ನಾಕರ ಜೈನ್ ಮತ್ತು ಪಕ್ಕದ ಮನೆಯ ಧೀರೇಂದ್ರ ಹೆಗ್ಡೆ ಎಂಬವರು ಕುಟುಂಬ ಸಮೇತ ಬೆಳಿಗ್ಗೆ 8 ಗಂಟೆಯ ವೇಳೆ ಪೂಜೆ ಸಲ್ಲಿಸಲೆಂದು ಬಸದಿಗಳಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಕಳ್ಳರು ರತ್ನಾಕರ ಜೈನ್ ಅವರ ಮನೆಯ ಹಿಂಬಾಗಿಲಿನ ಚಿಲಕವನ್ನು ಮುರಿದು ಒಳ ಪ್ರವೇಶಿಸಿ 25 ಪವನ್ ಚಿನ್ನ ಮತ್ತು 20 ಸಾವಿರ ನಗದು ಹಾಗೂ ಧಿರೇಂದ್ರ ಹೆಗ್ಡೆ ಎಂಬವರ ಮುಂಬಾಗಿಲಿನ ಚಿಲಕಮುರಿದು 20 ಗ್ರಾಂ. ಚಿನ್ನ ಹಾಗೂ 60 ಸಾವಿರ ನಗದನ್ನು ದೋಚಿದ್ದಾರೆ. ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಮನೋಜ್ ಕುಮಾರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Also Read  ಪತ್ನಿ ತವರುಮನೆಗೆ ಹೋಗಿದ್ದ ಸಂದರ್ಭ ಪತಿ ಕಾಣೆ..! ➤ ದೂರು ದಾಖಲು

error: Content is protected !!
Scroll to Top