ವಿಟ್ಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕೊಣಾಜೆ, ಮಾ.21. ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಹರೀಶ್ ಮನೆಗೆ ಬರುವಾಗ ಕೈಯಲ್ಲಿ ಪೆಟ್ರೋಲ್ ನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌‌ ಎನ್ನಲಾಗಿದೆ.

Also Read  ಕೃಷಿ ವಿಜ್ಞಾನ ಕೇಂದ್ರದಲ್ಲಿ ಭತ್ತದ ಬೀಜ ಮಾರಾಟಕ್ಕೆ ಲಭ್ಯ

 

 

error: Content is protected !!
Scroll to Top