ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಸುಳ್ಯ ತಾಲೂಕಿನ 22 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 13 ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆವರಣದ ನೀರಬಿದರೆ ಮಹಾಲಿಂಗೇಶ್ವರ ಭಟ್ ಸಭಾಂಗಣದ ಪಾನತ್ತಿಲ ಈಶ್ವರಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ.







ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಮಿತ್ರ ಯುವಕ ಮಂಡಲ(ರಿ). ಕ್ಯೊಕುಳಿ ಕುರಲ್ ತುಳುಕೂಟ ದುಗ್ಗಲಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಸಂತ ಶೆಟ್ಟಿ ಬೆಳ್ಳಾರೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.






error: Content is protected !!
Scroll to Top