ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಮಂಗಳೂರು ನಗರ ವಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಯಾರಿಕೆ ಹಾಗೂ ದಾಸ್ತಾನು ಚಟುವಟಿಕೆ ನಡೆಸುವ ಕೇಂದ್ರಗಳಿಗೆ ಮಾರ್ಚ್ 6ರಿಂದ 20ರವರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಸಹಿತ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ಮಾರ್ಚ್ 16ರಂದು ದಾಳಿ ನಡೆಸಿ ಒಟ್ಟು 23,400 ಲೀಟರ್ ಬಿಯರ್, 1 ಆಟೋ ರಿಕ್ಷಾ ಮತ್ತು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಾರ್ಚ್ 17ರಂದು ಬೆಳ್ತಂಗಡಿ ತಾಲೂಕಿನಲ್ಲಿ 4.140 ಲೀಟರ್ ಮದ್ಯ ಹಾಗೂ ಒಂದು ವಾಹನವನ್ನು ಜಪ್ತಿ ಮಾಡಲಾಗಿದೆ. ಮಾರ್ಚ್ 18ರಂದು 20 ಲೀಟರ್ ಶೇಂದಿಯನ್ನು ವಶಪಡಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಸರಕಾರಿ ಆಸ್ಪತ್ರೆಗಳು ಬೆಳೆಯಲು ಆಯುಷ್ಮಾನ್ ಭಾರತ ಮತ್ತು ಜನ ಔಷಧಿ ಯೋಜನೆಗಳು ಪೂರಕವಾಗಿವೆ► ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ

 

error: Content is protected !!
Scroll to Top